ಅಪಘಾತ: ಭಟ್ಕಳ ಮೂಲದ ವಿದ್ಯಾರ್ಥಿ ಮೃತ್ಯು
Update: 2016-09-22 00:23 IST
ಮಂಗಳೂರು, ಸೆ. 21: ನಗರದ ಹೊರವಲಯದ ನಾಗುರಿ ಜಂಕ್ಷನ್ನಲ್ಲಿ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭಟ್ಕಳ ಮೂಲದ ಮುಹಮ್ಮದ್ ರಯಾನ್ ಮೃತಪಟ್ಟ ಯುವಕ. ಈತ ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ.
ರಯಾನ್ ಬುಧವಾರ ಸಂಜೆ ದ್ವಿಚಕ್ರ ವಾಹನದಲ್ಲಿ ಅಡ್ಯಾರ್ನಿಂದ ಮಂಗಳೂರಿಗೆ ಬರುತ್ತಿದ್ದ ಸಂದರ್ಭ ಅದೇ ಮಾರ್ಗದಲ್ಲಿ ಮಂಗಳೂರಿಗೆ ಬರುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ರಯಾನ್ ಟಿಪ್ಪರ್ನ ಹಿಂಬದಿಯ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಗ್ರಾಮಾಂತರ ಠಾಣಾ ಪೊಲೀಸರು ತಿಳಿಸಿದ್ದಾರೆ.