ಸೋಮವಾರ ಮತ್ತೆ ಸಂಪುಟ ಸೇರಲಿದ್ದಾರೆ ಕೆ.ಜೆ.ಜಾರ್ಜ್

Update: 2016-09-24 07:11 GMT

ಬೆಂಗಳೂರು, ಸೆ.24: ಡಿವೈಎಸ್ಪಿಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಜೆ.ಜಾರ್ಜ್ ಮತ್ತೆ ರಾಜ್ಯ ಸಂಪುಟ ಸೇರುತ್ತಿದ್ದಾರೆ. ಅವರು ಸಚಿವರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಪ್ರಮಾಣ ವಚನ ಸ್ವೀಕಾರ ಸಮಾರಂಭವು ಅಂದು ಬೆಳಗ್ಗೆ 10:15ಕ್ಕೆ ಜರಗಲಿದೆ. ಅವರು ಅಂದು ಬೆಳಗ್ಗೆ ರಾಜಭವನದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ದೊರೆಯಲಿದೆ.

ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು ಜಾರ್ಜ್‌ರ ವಿರುದ್ಧದ ಆರೋಪವನ್ನು ಅಲ್ಲಗಳೆದಿದ್ದು, ಬಿ. ರಿಪೋರ್ಟ್ ಸಲ್ಲಿಕೆ ಮಾಡಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ದಿಲ್ಲಿಗೆ ತೆರಳಿದ ಸಂದರ್ಭ ಜಾರ್ಜ್‌ರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ಪಡೆದುಕೊಂಡು ಬಂದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News