ವಕ್ಫ್ ನ್ಯಾಯಾಧೀಕರಣ ಸದಸ್ಯರಾಗಿ ಅಕ್ರಮ್ ಪಾಷ ನೇಮಕ
Update: 2016-09-24 16:46 IST
ಬೆಂಗಳೂರು, ಸೆ.24: ಹಿರಿಯ ಕೆ.ಎ.ಎಸ್. ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕರಾಗಿರುವ ಅಕ್ರಮ್ ಪಾಷರನ್ನು ಕರ್ನಾಟಕ ವಕ್ಫ್ ನ್ಯಾಯಾಧೀಕರಣ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹೀಗಿರುವ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕ ಸ್ಥಾನದೊಂದಿಗೆ ಹೆಚ್ಚುವರಿಯಾಗಿ ಈ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ