ಇಂದು ನ್ಯಾಯವಾದಿ ದಿನೇಶ್ ಹೆಗ್ಡೆ ಉಳಿಪಾಡಿಗೆ ಮಾನವ ಹಕ್ಕು ಪ್ರಶಸ್ತಿ
Update: 2016-09-25 18:17 GMT
ಮಂಗಳೂರು, ಸೆ.25: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಮಾನವ ಹಕ್ಕು ಪ್ರಶಸ್ತಿಯನ್ನು ನಗರದ ವಕೀಲ ದಿನೇಶ್ ಹೆಗ್ಡೆ ಉಳಿಪಾಡಿ ಅವರಿಗೆ ನೀಡಲಾಗುವುದು ಎಂದು ಫೆಡರೇಶನ್ ತಿಳಿಸಿದೆ.
ಸೆ.26ರಂದು ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಮಾನವ ಹಕ್ಕು ಆಯೋಗದ ಸದಸ್ಯ ಸಿ.ಜೆ.ಹುನಗುಂದ ‘ಮಾನವ ಹಕ್ಕು’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.