ಮನೆ ಮಂಜೂರಾತಿ ಪತ್ರ ವಿತರಣೆ: ದಿನ ಮುಂದೂಡಿಕೆ

Update: 2016-09-25 18:33 GMT

 
ಉಡುಪಿ ಸೆ.25: ವಿವಿಧ ಯೋಜನೆಗಳಡಿ ನಿವೇಶನ ಹಕ್ಕು ಪತ್ರ, ಮನೆ ಮಂಜೂರಾತಿ ಪತ್ರಗಳನ್ನು ವಿತರಣೆಗೆ ಇದೇ ಸೆ.27ರಂದು ನಿಗದಿಯಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಅ.5ಕ್ಕೆ ಪೂರ್ವಾಹ್ನ 11:15ಕ್ಕೆ ಮುಂದೂಡಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದ ನಿವೇಶನ ಕಳದುಕೊಂಡ ನಿರಾಶ್ರಿತ 59 ಸಂತ್ರಸ್ಥ ಫಲಾನುಭವಿಗಳಿಗೆ ನಿವೇಶನದ ಹಕ್ಕುಪತ್ರ, ರಾಜೀವ ಗಾಂಧಿ ಗ್ರಾಮೀಣ ವಸತಿ ಯೋಜನೆಯಡಿ ಮನೆ ಮಂಜೂರಾತಿ ಪತ್ರ, 2015-16ರ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ ಹಾಗೂ ವಾಜಪೇಯಿ ವಸತಿ ಯೋಜನೆಯಡಿ 40 ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು ಪುತ್ತೂರು ಗ್ರಾಮದ ಸುಬ್ರಹ್ಮಣ್ಯನಗರ ವಾರ್ಡಿನ ಲಿಂಗೋಟಿಗುಡ್ಡೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ವಿತರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News