ಮನೆ ಮಂಜೂರಾತಿ ಪತ್ರ ವಿತರಣೆ: ದಿನ ಮುಂದೂಡಿಕೆ
Update: 2016-09-25 18:33 GMT
ಉಡುಪಿ ಸೆ.25: ವಿವಿಧ ಯೋಜನೆಗಳಡಿ ನಿವೇಶನ ಹಕ್ಕು ಪತ್ರ, ಮನೆ ಮಂಜೂರಾತಿ ಪತ್ರಗಳನ್ನು ವಿತರಣೆಗೆ ಇದೇ ಸೆ.27ರಂದು ನಿಗದಿಯಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಅ.5ಕ್ಕೆ ಪೂರ್ವಾಹ್ನ 11:15ಕ್ಕೆ ಮುಂದೂಡಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದ ನಿವೇಶನ ಕಳದುಕೊಂಡ ನಿರಾಶ್ರಿತ 59 ಸಂತ್ರಸ್ಥ ಫಲಾನುಭವಿಗಳಿಗೆ ನಿವೇಶನದ ಹಕ್ಕುಪತ್ರ, ರಾಜೀವ ಗಾಂಧಿ ಗ್ರಾಮೀಣ ವಸತಿ ಯೋಜನೆಯಡಿ ಮನೆ ಮಂಜೂರಾತಿ ಪತ್ರ, 2015-16ರ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ ಹಾಗೂ ವಾಜಪೇಯಿ ವಸತಿ ಯೋಜನೆಯಡಿ 40 ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು ಪುತ್ತೂರು ಗ್ರಾಮದ ಸುಬ್ರಹ್ಮಣ್ಯನಗರ ವಾರ್ಡಿನ ಲಿಂಗೋಟಿಗುಡ್ಡೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ವಿತರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.