ಕೆಂಜೂರು ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

Update: 2016-09-27 16:06 GMT

ಉಡುಪಿ, ಸೆ.27: ಕೆಂಜೂರಿನ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣದ ಆರೋಪಿಗಳಾದ ರಾಘವೇಂದ್ರ ಶೆಟ್ಟಿ, ಸುಕುಮಾರ್ ಕುಲಾಲ್ ಮತ್ತು ಸುದೀಪ್ ಪೂಜಾರಿ ಜಾಮೀನು ಅರ್ಜಿಯ ವಿಚಾರಣೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೆ.29ಕ್ಕೆ ಮುಂದೂಡಿ ಆದೇಶ ನೀಡಿದೆ.

ಸುಕುಮಾರ್ ಕುಲಾಲ್ ಮತ್ತು ಸುದೀಪ್ ಪೂಜಾರಿ ಪರ ವಕೀಲ ಸಂಜೀವ ಇಂದು ತಮ್ಮ ವಾದವನ್ನು ಮಂಡಿಸಿದರು. ಜಿಲ್ಲಾ ಸರಕಾರಿ ಅಭಿ ಯೋಜಕಿ ಶಾಂತಿ ಬಾಯಿ ಇದಕ್ಕೆ ಪ್ರತಿವಾದ ಮಂಡಿಸಲು ಅವಕಾಶ ಕಲ್ಪಿಸಿ ಪ್ರಕರಣವನ್ನು ಸೆ.29ಕ್ಕೆ ಮುಂದೂಡಿ ನ್ಯಾಯಾಧೀಶ ಶಿವಶಂಕರ್ ಅಮರಣ್ಣನವರ್ ಆದೇಶ ನೀಡಿದರು.

ಅದೇ ದಿನಕ್ಕೆ ರಾಘವೇಂದ್ರ ಶೆಟ್ಟಿಯ ಜಾಮೀನು ಅರ್ಜಿಯ ವಿಚಾರಣೆಯನ್ನೂ ಕೂಡ ಮುಂದೂಡಲಾಯಿತು. ರಾಘವೇಂದ್ರ ಪರವಾಗಿ ವಕೀಲ ವೈ.ವಿಕ್ರಂ ಹೆಗ್ಡೆ ವಾದಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News