×
Ad

ವಾಲ್ಮೀಕಿ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು: ಡಿಸಿ ಜಿ.ಸತ್ಯವತಿ

Update: 2016-09-27 22:26 IST

ಚಿಕ್ಕಮಗಳೂರು, ಸೆ.27: ಪ್ರತಿ ವರ್ಷದಂತೆ ಈ ಬಾರಿ ಅ.15ರಂದು ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಾಲ್ಮೀಕಿ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಜಿ.ಸತ್ಯವತಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಈ ಸಂಬಂಧ ಎಲ್ಲ ಸಿದ್ಧ್ದತೆಗಳ ಕುರಿತು ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ಅ.15ರಂದು ಕುವೆಂಪು ಕಲಾಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಇದಕ್ಕೂ ಮುನ್ನ ಎಂದಿನಂತೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ನಗರದ ತಾಲೂಕು ಕಚೇರಿಯಿಂದ ಬೆಳಗ್ಗೆ 9:30ಕ್ಕೆೆ ಮಹರ್ಷಿ ವಾಲ್ಮೀಕಿಯ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಎಲ್ಲ ಜನಪ್ರತಿನಿಧಿಗಳು, ಗಣ್ಯರನ್ನು ಆಹ್ವಾನಿಸಲಾಗುವುದು ಹಾಗೂ ಮಹರ್ಷಿ ವಾಲ್ಮೀಕಿ ಕುರಿತಂತೆ ತಜ್ಞರಿಂದ ಉಪನ್ಯಾಸ ನೀಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಸರಕಾರಿ ಸೌಲಭ್ಯ ಗಳನ್ನು ವಿತರಿಸಲಾಗುವುದು ಎಂದ ಅವರು, ವಾಲ್ಮೀಕಿ ಜಯಂತಿಯ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಗಿರಿಜನ ಯೋಜನೆ ಸಮನ್ವಯಾಧಿಕಾರಿ ಲಲಿತಾಬಾಯಿ, ಚಿಕ್ಕಮಗಳೂರು ವಾಲ್ಮೀಕಿ ನಾಯಕ ಸಂದ ಅಧ್ಯಕ್ಷ ಜಿ.ಕೆ ಭೀಮಪ್ಪ, ಮುಖಂಡರಾದ ಬಲರಾಮ್, ಮಂಜುನಾಥ, ದಯಾನಂದ, ಉಮೇಶ್ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News