ಇಂದಿನ ಕಾರ್ಯಕ್ರಮ

Update: 2016-09-28 18:26 GMT

ನಗರಸಭೆ ಸಾಮಾನ್ಯ ಸಭೆ: ಉಡುಪಿ ನಗರಸಭೆಯ ಸಾಮಾನ್ಯ ಸಭೆ. ಅಧ್ಯಕ್ಷತೆ ಮೀನಾಕ್ಷಿ ಮಾಧವ ಬನ್ನಂಜೆ. ಸಮಯ: ಬೆಳಗ್ಗೆ 10:30ಕ್ಕೆ. ಸ್ಥಳ: ನಗರಸಭೆಯ ಸತ್ಯಮೂರ್ತಿ ಸಭಾಂಗಣ, ಉಡುಪಿ. ಹಿಂದೂಸ್ತಾನಿ ಸಂಗೀತ: ಮಣಿಪಾಲ ವಿವಿಯ ಸಾಂಸ್ಕೃತಿಕ ಸಂಯೋಜನಾ ಸಮಿತಿ ವತಿಯಿಂದ ದುಬೈಯ ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಮಿಲಿಂದ ಚಿತ್ತಾಲ್ ಇವರಿಂದ ಹಿಂದೂಸ್ತಾನಿ ಗಾಯನ. ಸಮಯ: ಸಂಜೆ 6:30ರಿಂದ. ಸ್ಥಳ: ಸ್ಕೂಲ್ ಆಫ್ ಕಮ್ಯುನಿಕೇಷನ್ ಸಭಾಂಗಣ, ಮಣಿಪಾಲ.
 ಪೇಜಾವರ ಶ್ರೀಗಳ ಪರ್ಯಾಯ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಂಜೆ 5ರಿಂದ ಚಂದ್ರಶಾಲೆ ಪುರಾಣ ಉಡುಪಿಯ ವಿದ್ವಾನ್ ಬ್ರಹ್ಮಣ್ಯಾಚಾರ್ಯರಿಂದ ಪ್ರವಚನ, 5:45ಕ್ಕೆ ರಾಜಾಂಗಣದಲ್ಲಿ ಬೆಂಗಳೂರಿನ ವಿದ್ವಾನ್ ರಾಘವೇಂದ್ರ ಆಚಾರ್ಯರಿಂದ ಧಾರ್ಮಿಕ ಉಪನ್ಯಾಸ, ಬಳಿಕ ಪೇಜಾವರ ಶ್ರೀಗಳಿಂದ ಅನುಗ್ರಹ ಸಂದೇಶ. ರಾತ್ರಿ 7ರಿಂದ ರಾಜಾಂಗಣದಲ್ಲಿ ಬಡಗುತಿಟ್ಟಿನ ಪ್ರಸಿದ್ಧ ಮಹಿಳಾ ಯಕ್ಷಗಾನ ಕಲಾವಿದರಿಂದ ಯಕ್ಷಗಾನ ‘ಕಾರ್ತ್ಯವೀರ್ಯಾರ್ಜುನ’

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News