ಮೈಸೂರು ದಸರಾ ವಿಶೇಷ : ಆಕಾಶ ಅಂಬಾರಿ ಸೇವೆಗೆ ಸಿಎಂ ಚಾಲನೆ
Update: 2016-10-01 11:36 IST
ಮೈಸೂರು, ಅ.1: ಮೈಸೂರು ದಸರಾದ ಹಿನ್ನೆಲೆಯಲ್ಲಿ ವಿಶೇಷ ಆಕಾಶ ಅಂಬಾರಿ ಸೇವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಸಂಕಷ್ಟದ ಪರಿಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಸರಳ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುತ್ತಿದೆ ಎಂದರು.
ಕಾವೇರಿ ನದಿನೀರು ಹಂಚಿಕೆ ಕುರಿತ ತೀರ್ಪಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರಕಾರದ ವಿರುದ್ಧ ಟೀಕೆ ಮಾಡುವುದಿಲ್ಲ. ಈ ಹಂತದಲ್ಲಿ ಯಾವ ಪಕ್ಷದ ವಿರುದ್ಧವೂ ಆರೋಪ ಮಾಡುವುದಿಲ್ಲ. ಮಧ್ಯಾಹ್ನ ಸರ್ವಪಕ್ಷ ಸಭೆ ಕರೆದಿದ್ದೇನೆ. ರಾಜ್ಯದ ಜನರ ಹಿತ ರಕ್ಷಣೆಗೆ ಸರಕಾರ ಬದ್ಧವಾಗಿದೆ ಎಂದು ಹೇಳಿದರು.
ಇದೇ ಸಂದರ್ಭ ದಸರಾ ಹಬ್ಬವನ್ನು ಉದ್ಘಾಟಿಸಲು ಆಗಮಿಸಿದ ಚನ್ನವೀರ ಕಣವಿ ಅವರಿಗೆ ಮುಖ್ಯಮಂತ್ರಿಗಳು ಸ್ವಾಗತ ಕೋರಿದರು.