×
Ad

ತೆಂಗಿನ ಮರದಿಂದ ಬಿದ್ದು ಮೃತ್ಯು

Update: 2016-10-08 22:00 IST

ಬೈಂದೂರು, ಅ.8: ತೆಂಗಿನ ಮರದಿಂದ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಯೊಬ್ಬರು ಕೈಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಅ.7ರಂದು ಶಿರೂರು ಎಂಬಲ್ಲಿ ನಡೆದಿದೆ.

ಮೃತರನ್ನು ಭಟ್ಕಳ ಬೆಳ್ಕೆಯ ಹೊನ್ನೆಮಾಡಿ ನಿವಾಸಿ ಬಲೀಂದ್ರ ನಾಯ್ಕೆ (54) ಎಂದು ಗುರುತಿಸಲಾಗಿದೆ.

ಇವರು ಶಿರೂರಿನ ಫಾರೂಕ್ ಸಾಹೇಬ್ ಎಂಬವರ ತೋಟದಲ್ಲಿ ತೆಂಗಿನ ಕಾಯಿ ಕೊಯ್ಯುತ್ತಿದ್ದ ಆಕಸ್ಮಿಕವಾಗಿ ಕೈತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡರು. ಮೊದಲು ಇವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಅಪರಾಹ್ನ 3.15ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News