ನಾಳೆ ಕೇರಳದಲ್ಲಿ ಹರತಾಳ

Update: 2016-10-12 11:18 GMT

ಕಾಸರಗೋಡು, ಅ.12: ಕಣ್ಣೂರಿನಲ್ಲಿ ಆರೆಸ್ಸೆಸ್-ಬಿಜೆಪಿ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದ ಹಿನ್ನೆಲೆಯಲ್ಲಿ ಅ.13ರಂದು ಕೇರಳದಲ್ಲಿ ಹರತಾಳಕ್ಕೆ ಬಿಜೆಪಿ ಕರೆ ನೀಡಿದೆ. ಹರತಾಳವು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಇರಲಿದೆ ಎಂದು ತಿಳಿದುಬಂದಿದೆ.

ಇದೇ ವೇಳೆ ಆಸ್ಪತ್ರೆ, ಹಾಲು, ಪೇಪರ್ ಮೊದಲಾದ ಅಗತ್ಯ ವಸ್ತುಗಳಿಗೆ ಹರತಾಳದಿಂದ ವಿನಾಯಿತಿ ನೀಡಲಾಗಿದೆ. ಪಿಣರಾಯಿಯಲ್ಲಿ ಇಂದು ಬೆಳಗ್ಗೆ ನಡೆದ ಆರೆಸ್ಸೆಸ್-ಬಿಜೆಪಿ ಕಾರ್ಯಕರ್ತ ರಮಿತ್‌ ಹತ್ಯೆಯ ಹಿನ್ನೆಲೆಯಲ್ಲಿ ಈ ಹರತಾಳಕ್ಕೆ ಕರೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನಮ್ ರಾಜಶೇಖರನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹತ್ಯೆಯನ್ನು ಖಂಡಿಸಿ ನಾಳೆ ಬೂತ್‌ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News