ನಾಲೆಗೆ ಉರುಳಿದ ಇನೋವಾ ಕಾರು ವಿದ್ಯಾರ್ಥಿಗಳಿಬ್ಬರ ಮೃತ್ಯು; ಓರ್ವ ಗಂಭೀರ

Update: 2016-10-13 18:56 GMT

ಚಾಮರಾಜನಗರ, ಅ.13: ಮೈಸೂರಿನಿಂದ ಚಾಮರಾಜನಗರಕ್ಕೆ ಬರುತ್ತಿದ್ದ ಕಾರೊಂದು ಆಲ್ದೂರು ಸಮೀಪದ ಕಬಿನಿ ನಾಲೆಗೆ ಆಕಸ್ಮಿಕವಾಗಿ ಉರುಳಿದ ಪರಿಣಾಮ ನಗರದ ಏಕಲವ್ಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ.

ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿರುವ ಏಕಲವ್ಯ ತಾಂತ್ರಿಕ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೈಸೂರು ಮೂಲದ ವಿದ್ಯಾರ್ಥಿಗಳಾದ ಕಾರ್ತಿಕ್ ಹಾಗೂ ದರ್ಶನ್ ಎಂಬವರೇ ದುರ್ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದು, ಮತ್ತೊಬ್ಬ ವಿದ್ಯಾರ್ಥಿ ದರ್ಶನ್ ತೀವ್ರ ಗಾಯಗಳೊಂದಿಗೆ ಟಿ.ನರಸೀಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News