ಕುಂತೂರು: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Update: 2016-10-15 05:50 GMT

ಕಡಬ, ಅ.15. ಠಾಣಾ ವ್ಯಾಪ್ತಿಯ ಕುಂತೂರು ಎಂಬಲ್ಲಿನ ಮನೆಯೊಂದರಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.

ಕುಂತೂರು ಸಮೀಪದ ಮುಡಿಪಿನಡ್ಕ ನಿವಾಸಿ ಅಬ್ದುರ್ರಹ್ಮಾನ್ ಎಂಬವರು ತನ್ನ ಪತ್ನಿ ಮಕ್ಕಳೊಂದಿಗೆ ಮನೆಯ ಮುಂಭಾಗದ ಹಾಲ್ ನಲ್ಲಿ ಮಲಗಿದ್ದರು. ಬೆಳಗ್ಗೆ ಎದ್ದು ನೋಡುವಾಗ ಕಪಾಟುಗಳನ್ನೆಲ್ಲಾ ಜಾಲಾಡಿ 7 ಪವನ್ ಚಿನ್ನ ಹಾಗೂ 70 ಸಾವಿರ ನಗದನ್ನು ಕಳ್ಳರು ದೋಚಿರುವುದು ಕಂಡುಬಂದಿದೆ.ಕಳ್ಳರು ಹಗಲು ಹೊತ್ತಿನಲ್ಲೇ ಮನೆಯೊಳಗಡೆ ಅವಿತು ಕುಳಿತಿರಬಹುದೆಂದು ಸಂಶಯಿಸಲಾಗಿದೆ. ಕಳ್ಳತನಗೈದ ಬಳಿಕ ಕಳ್ಳರು ಮನೆಯ ಹಿಂಬಾಗಿಲು ತೆರೆದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪುತ್ತೂರು ಎಎಸ್ಪಿ ರಿಷ್ಯಂತ್ ಕುಮಾರ್, ಉಪ್ಪಿನಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಅನಿಲ್ ಕುಲಕರ್ಣಿ, ಕಡಬ ಠಾಣಾ ಎಎಸ್ಸೈ ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಶ್ವಾನ ದಳ ಆಗಮಿಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News