×
Ad

ನೇಣುಬಿಗಿದು ಯುವಕ ಆತ್ಮಹತ್ಯೆ

Update: 2016-10-18 21:18 IST

ಮುಲ್ಕಿ, ಅ.18: ಕಿನ್ನಿಗೋಳಿ ಸಮೀಪದ ನಡುಗೋಡು ಮೂಡುದೇವಸ್ಯ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸ್ಥಳೀಯ ನಿವಾಸಿ ಭಾಸ್ಕರ ಶೆಟ್ಟಿ(33) ಎಂದು ಗುರುತಿಸಲಾಗಿದೆ.

ಭಾಸ್ಕರ ಶೆಟ್ಟಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮನೆಯಲ್ಲಿ ಭಾಸ್ಕರ ಶೆಟ್ಟಿ ಮತ್ತು ಅವರ ತಂದೆ ಮಾತ್ರ ಇರುತ್ತಿದ್ದು ತಂದೆ ನೆರೆಮನೆಗೆ ಪೂಜೆಯ ನಿಮಿತ್ತ ಹೋಗಿದ್ದಾಗ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಪರೀತ ಕುಡಿತ ಹಾಗೂ ಮಾನಸಿಕ ಖಿನ್ನತೆಯೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News