ಪ್ರತಿನಿಧಿಯಾಗಿ ಹೆಸರು ನೋಂದಾಯಿಸಿ

Update: 2016-10-19 18:54 GMT

ಮಾನ್ಯರೆ,
82ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2016ರ ಡಿಸೆಂಬರ್ 2, 3 ಮತ್ತು 4ರಂದು ರಾಯಚೂರು ಜಿಲ್ಲೆಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ನುಡಿ ಜಾತೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭಿಮಾನಿಗಳು ಪ್ರತಿನಿಧಿಗಳಾಗಿ ತಮ್ಮ ಹೆಸರುಗಳನ್ನು ದಿನಾಂಕ 20-11-2016ರೊಳಗಾಗಿ ಆಯಾಯ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷರ ಹತ್ತಿರ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಸಾಹಿತ್ಯ ಪರಿಷತ್ತಿನಲ್ಲಿ ರೂ.250 ಪ್ರತಿನಿಧಿಶುಲ್ಕವನ್ನು ಪಾವತಿಸಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಅವಧಿ ಮೀರಿ ಬರುವ ಕೋರಿಕೆಗಳು ಹಾಗೂ ಸಮ್ಮೇಳನ ನಡೆಯುವ ಸ್ಥಳದಲ್ಲಿ ಪತಿನಿಧಿಯಾಗಿ ನೋಂದಾಯಿಸಲು ಅವಕಾಶವಿರುವುದಿಲ್ಲ.
-ಡಾ. ರಾಜಶೇಖರ ಹತಗುಂದಿ,
ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು
ಪಂಪ ಮಹಾಕವಿ ರಸ್ತೆ, ಚಾಮರಾಜ ಪೇಟೆ, ಬೆಂಗಳೂರು - 560 018

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News