ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ
Update: 2016-10-20 10:27 GMT
ಉಳ್ಳಾಲ, ಅ.20: ಕೋಟೆಕಾರಿನ ಕೊಂಡಾಣ ರಸ್ತೆಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ನಾಗದೇವರ ಕಟ್ಟೆ ಮತ್ತು ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ ನೆರವೇರಿಸುವ ಕಾರ್ಯಕ್ರಮ ಬುಧವಾರ ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಶಿರಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿಕೊಡಲಾದ ಮನೆಯನ್ನು ಫಲಾನುಭವಿಗಳಿಗೆ ಬುಧವಾರ ಹಸ್ತಾಂತರಿಸಿದರು. ಸಾಯಿ ಬಾಬಾ ಮಂದಿರದ ಆಡಳಿತ ಮೊಕ್ತೇಸರ ಕೆ.ಪಿ.ಸುರೇಶ್, ಧಾರ್ಮಿಕ ಪರಿಷತ್ನ ಮಾಜಿ ಸದಸ್ಯ ಕೆ.ಟಿ ಸುವರ್ಣ, ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಕೆ ಭೈರಪ್ಪ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಕಾಪಿಕಾಡು ಉಮಾಮಹೇಶ್ವರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ಜೆ.ಶೇಖರ್, ಉದ್ಯಮಿ ಹರೀಶ್ ಕುತ್ತಾರು, ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷ ಉದಯ್ ಕುಮಾರ್ ಸುಳ್ಳೆಂಜೀರ್, ಪತ್ರಕರ್ತ ವಿಧ್ಯಾಧರ್ ಶೆಟ್ಟಿ ಉಪಸ್ಥಿತರಿದ್ದರು.