×
Ad

ಸಾರ್ವಜನಿಕರಿಂದ ಅಹವಾಲು ಸ್ವೀಕಾರ

Update: 2016-10-20 23:53 IST

ಉಡುಪಿ, ಅ.20: ಉಡುಪಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ಅಧಿಕಾರಿ ಗಳು ಅ.22ರಂದು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಅ.24ರಂದು ಪೂರ್ವಾಹ್ನ 11ರಿಂದ ಸಂಜೆ 4ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಸಾರ್ವ ಜನಿಕರಿಂದ ಅಹವಾಲು ಸ್ವೀಕರಿಸುವರು. ಯಾವುದೇ ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News