ಎಸ್.ಟಿ.ಸೋಮಶೇಖರ್ ವಿರುದ್ಧಎಸಿಬಿಗೆ ದೂರು

Update: 2016-10-21 18:35 GMT

ಬೆಂಗಳೂರು, ಅ. 21: ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಿ 819 ಕೋಟಿ ರೂ. ಅನುದಾನ ಪಡೆದು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿದೆ ಎಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ತಿಳಿಸಿದ್ದಾರೆ.

ಶುಕ್ರವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯ ನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು 819 ಕೋಟಿ ರೂ.ಗಳನ್ನು ತಮ್ಮ ಕ್ಷೇತ್ರಕ್ಕೆ ಬಿಡುಗಡೆ ಮಾಡಿಸಿಕೊಂಡಿರುವ ಯಶವಂತಪುರ ಶಾಸಕ ಎಸ್. ಟಿ. ಸೋಮಶೇಖರ್, ಬಿಬಿಎಂಪಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ತಮ್ಮ ಸಂಬಂಧಿಗಳು ಮತ್ತು ಬೆಂಬಲಿಗರಿಗೆ ಕಾಮಗಾರಿ ಗುತ್ತಿಗೆ ನೀಡುವ ಮೂಲಕ ಕೋಟ್ಯಂತರ ರೂ.ಗಳ ಅವ್ಯವಹಾರ ನಡೆಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
  

3 ವರ್ಷಗಳಲ್ಲಿ ಕೇಂದ್ರ-ರಾಜ್ಯ ಸರಕಾರಗಳ ಅನುದಾನ ಸೇರಿದಂತೆ ಯಶವಂತಪುರ ಕ್ಷೇತ್ರಕ್ಕೆ 819 ಕೋಟಿ ರೂ.ಗಳು ಬಿಡುಗಡೆಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News