×
Ad

ಶ್ರೀನಿವಾಸ ಪ್ರಸಾದ್ , ಇಬ್ಬರು ಬೆಂಬಲಿಗರ ಕಾಂಗ್ರೆಸ್‌ನಿಂದ ಉಚ್ಚಾಟನೆ

Update: 2016-10-22 16:32 IST

ಮೈಸೂರು, ಅ.22: ಪಕ್ಷ ವಿರೋಧಿ ಚಟುವಟಿಕೆಯ ಆರೋಪದಲ್ಲಿ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಹಾಗೂ ಅವರ ಇಬ್ಬರು ಬೆಂಬಲಿಗರನ್ನು ಕಾಂಗ್ರೆಸ್ ನಿಂದ ಉಚ್ಚಾಟಿಸಲಾಗಿದೆ.
ಇಂದು ನಡೆದ ಜಿಲ್ಲಾ ಕಾಂಗ್ರೆಸ್‌ ಸಭೆಯಲ್ಲಿ  ವಿ. ಶ್ರೀನಿವಾಸ ಪ್ರಸಾದ್ ಮತ್ತು ಅವರ ಬೆಂಬಲಿಗರಾದ  ಹುಳ್ಳಹಳ್ಳಿ ಮಹದೇವಪ್ಪ ಮತ್ತು ಕುಂಬ್ರಣ ಸುಬ್ಬಣ್ಣ ಅವರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ ವಿಜಯ ಕುಮಾರ್‌ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News