ಸಾಣೂರು: ಸರಕಾರಿ ಜಾಗದಲ್ಲಿದ್ದ ಅಕ್ರಮ ಮನೆಗಳ ತೆರವು

Update: 2016-10-23 10:53 GMT

ಕಾರ್ಕಳ, ಅ.23: ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ 11 ಅನಧಿಕೃತ ಶೆಡ್‌ನಂತಿದ್ದ ಮನೆಗಳನ್ನು ಕಾರ್ಕಳ ತಹಶೀಲ್ದಾರ್ ತೆರವುಗೊಳಿಸಿದ ಘಟನೆ ಶನಿವಾರ ನಡೆದಿದೆ.

ವಾಸ್ತವ್ಯವಿಲ್ಲದ ಈ ಮನೆಗಳು ಅಕ್ರಮವಾಗಿ ನಿರ್ಮಾಣಗೊಂಡಿರುವ ಬಂದಿರುವ ದೂರಿನ ಹಿನ್ನೆಲೆಯಲ್ಲಿ ತಹಶೀಲ್ದಾರ್ ಗುರುಪ್ರಸಾದ್ ಈ ತೆರವು ಕಾರ್ಯಾಚರಣೆ ನಡೆಸಿದರು.

ಕಂದಾಯ ನಿರೀಕ್ಷಕ ಸುರೇಶ್ ರಾವ್, ಗ್ರಾಮ ಕರಣಿಕ ರವಿಚಂದ್ರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News