ವಿದ್ಯಾರ್ಥಿಯಿಂದ ಪ್ರಾಂಶುಪಾಲರಿಗೆ ಹಲ್ಲೆ ಪ್ರಕರಣ: ಜಮಾಅತೆ ಇಸ್ಲಾಮಿ ಹಿಂದ್ ಖಂಡನೆ

Update: 2016-10-23 18:24 GMT


ಮಂಗಳೂರು, ಅ.23: ನಗರದ ಕಾಲೇಜೊಂದರ ಪ್ರಾಂಶುಪಾಲರಿಗೆ ಅದೇ ಕಾಲೇಜಿನ ವಿದ್ಯಾರ್ಥಿ ಯೊಬ್ಬ ನಡೆಸಿದ ಹಲ್ಲೆಯನ್ನು ಜಮಾಅತೆ ಇಸ್ಲಾಮಿ ಹಿಂದ್ ದ.ಕ.ಜಿಲ್ಲಾ ಸಮಿತಿ ಖಂಡಿಸಿದೆ

ಪ್ರಾಂಶುಪಾಲರ ಮೇಲೆ ವಿದ್ಯಾರ್ಥಿಯೊಬ್ಬ ನಡೆಸಿದ ಹಲ್ಲೆಯು ಅತ್ಯಂತ ಕೆಟ್ಟ ಬೆಳವ ಣಿಗೆಯಾಗಿದ್ದು, ಇದನ್ನು ಎಲ್ಲರೂ ಒಕ್ಕೊರ ಲಿನಿಂದ ಖಂಡಿಸಬೇಕು. ವಿದ್ಯಾರ್ಥಿಯೊಬ್ಬ ಗುರುಗಳು ಹಾಗೂ ಧಾರ್ಮಿಕ ವಿದ್ವಾಂಸರ ಮೇಲೆ ಹಲ್ಲೆ ನಡೆಸುವುದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ ಎಂದಿ ರುವ ಜಮಾಅತೆ ಇಸ್ಲಾಮಿ ಹಿಂದ್ ದ.ಕ.ಜಿಲ್ಲಾ ಸಮಿತಿ ಇಂತಹ ಘಟನೆಗಳು ಮರು ಕಳಿಸದಂತೆ ಜಾಗೃತಿ ಮೂಡಿಸಬೇಕು. ಅಲ್ಲದೆ, ಹಲ್ಲೆ ನಡೆಸಿದ ವಿದ್ಯಾರ್ಥಿಯ ಮೇಲೆ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News