ಉ.ಪ್ರ.:ಗುಂಡಿಟ್ಟು ನಿವೃತ್ತ ಪ್ರಾಂಶುಪಾಲರ ಹತ್ಯೆ

Update: 2016-10-25 10:38 GMT

ಕಾನಪುರ,.25: ಶಾಲೆಯೊಂದರಲ್ಲಿ ತರಗತಿಯನ್ನು ಮುಗಿಸಿಕೊಂಡು ಮರಳುತ್ತಿದ್ದ ನಿವೃತ್ತ ಪ್ರಾಂಶುಪಾಲರೋರ್ವರನ್ನು ವಿಷ್ಣುಪುರಿ ಗ್ರಾಮದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ರಮೇಶ ಶುಕ್ಲಾ(62) ಎರಡು ವರ್ಷಗಳ ಹಿಂದೆ ಪ್ರಾಂಶುಪಾಲರ ಹುದ್ದೆಯಿಂದ ನಿವೃತ್ತರಾಗಿದ್ದರೂ ಬೋಧಿಸುವ ತನ್ನ ಹವ್ಯಾಸದ ಹಿನ್ನೆಲೆಯಲ್ಲಿ ಗ್ರಾಮದ ಶಾಲೆಯ ಲ್ಲಿ ಮಕ್ಕಳಿಗೆ ತರಗತಿಗಳನ್ನು ನಡೆಸುತ್ತಿದ್ದರು.

ಸೋಮವಾರ ಸಂಜೆ ಅವರು ತನ್ನ ಸೈಕಲ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಅವರನ್ನು ಹತ್ಯೆ ಮಾಡಲಾಗಿದೆ.

 ಕುಟುಂಬದ ಭೂಮಿಯ ಕುರಿತಾದ ಕಲಹ ಈ ಹತ್ಯೆಗೆ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News