ನ.3ರಿಂದ ಕಾರ್ಕಳದಲ್ಲಿ ‘ಕಾಸರವಳ್ಳಿ ಚಿತ್ರೋತ್ಸವ’

Update: 2016-10-25 18:52 GMT

ಕಾರ್ಕಳ, ಅ.25: ರಂಗಸಂಸ್ಕೃತಿಯ ಆಶ್ರಯದಲ್ಲಿ ನ.3ರಿಂದ 5ರವರೆಗೆ ಪ್ರಕಾಶ್ ಹೊಟೇಲಿನ ಸಂಭ್ರಮ ಸಭಾಂಗಣದಲ್ಲಿ ‘ಗಿರೀಶ್ ಕಾಸರವಳ್ಳಿ ಚಿತ್ರೋತ್ಸವ’ ನಡೆಯಲಿದೆ.

ಈ ಚಲನಚಿತ್ರೋತ್ಸವದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ತಬರನ ಕಥೆ’, ‘ತಾಯಿ ಸಾಹೇಬ’ ಹಾಗೂ ‘ಹಸೀನಾ’ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಪ್ರತಿದಿನ ಸಂಜೆ 5 ಗಂಟೆಗೆ ಪ್ರಾರಂಭಗೊಳ್ಳುವ ಈ ಚಿತ್ರೋತ್ಸವಕ್ಕೆ ಉಚಿತ ಪ್ರವೇಶವಿದೆ.
ಚಿತ್ರೋತ್ಸವನ್ನು ಶಾಸಕ ವಿ.ಸುನೀಲ್ ಕುಮಾರ್ ಉದ್ಘಾಟಿಸಲಿದ್ದು, ಗಿರೀಶ್ ಕಾಸರವಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಂಗಸಂಸ್ಕೃತಿಯ ಅಧ್ಯಕ್ಷ ಎಸ್. ನಿತ್ಯಾನಂದ ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ನ.5ರ ಸಮಾರೋಪ ಸಮಾರಂಭದಲ್ಲಿ ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ ಭಾಗವಹಿಸಲಿದ್ದಾರೆ. ಕಾಸರವಳ್ಳಿ ಮೂರು ದಿನವೂ ಉಪಸ್ಥಿತರಿದ್ದು, ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಂಗಸಂಸ್ಕೃತಿಯ ಪ್ರಧಾನ ಕಾರ್ಯದರ್ಶಿ ಡಾ.ಜಯಪ್ರಕಾಶ್ ಮಾವಿನಕುಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News