ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಸಹೋದರ ನಿಗೂಢ ಸಾವು
ಬೆಂಗಳೂರು/ಬೆಳಗಾವಿ, ಅ. 27: ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಕಿರಿಯ ಸಹೋದರ ಮನೆಯೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಕಿರಿಯ ಸಹೋದರ ಯಲ್ಲಪ್ಪ ಹಂಡಿಭಾಗ್(28) ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಗುರುವಾರ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಬಾಡಿಗೆ ಮನೆಯೊಂದರಲ್ಲಿ ಯಲ್ಲಪ್ಪಹಂಡಿಭಾಗ್, ನೇಣು ಬಿಗಿದುಕೊಂಡು ನಿಗೂಢವಾಗಿ ಸಾವನ್ನಪ್ಪಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಕಲ್ಲಪ್ಪಹಂಡಿಭಾಗ್ ಅವರ ಕಿರಿಯ ಸಹೋದರ 2008 ರಲ್ಲಿ ಪೇದೆಯಾಗಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ನಿನ್ನೆಯಷ್ಟೇ ಕಿತ್ತೂರು ಉತ್ಸವದ ಬಂದೋಬಸ್ತ್ ಮುಗಿಸಿ ಕುಲಗೋಡಕ್ಕೆ ವಾಪಸ್ಸಾಗಿದ್ದರು. ಈ ಸಂಬಂಧ ಕುಲಗೋಡು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ದೇಹವನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.