×
Ad

ಶಿವಮೊಗ್ಗದಾದ್ಯಂತ ಕುಡಿಯುವ ನೀರಿಗೆ ಹಾಹಾಕಾರ

Update: 2016-10-27 22:21 IST

 ಬಿ. ರೇಣುಕೇಶ್

ಶಿವಮೊಗ್ಗ, ಅ. 27: ಬೇಸಿಗೆ ಕಾಲ ಇನ್ನೂ ಆರಂಭವಾಗಿಲ್ಲ. ಅದಾಗಲೇ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದು ರಾಗಿದೆ! ಹೌದು. ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನ ಸುಮಾರು ಒಂಬತ್ತಕ್ಕೂ ಅಧಿಕ ಗ್ರಾಮಗಳಲ್ಲಿ ಅಂತರ್ಜಲ ಕುಸಿತ ದಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ನಡುವೆ ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಪಂಚಾಯತ್ ಆಡಳಿತ ಅಗತ್ಯ ಕ್ರಮಕೈಗೊಂಡಿದೆ. ಮುಂಗಾರು ಮಳೆ ಕೊರತೆ ಹಾಗೂ ಹೆಚ್ಚಾಗುತ್ತಿರುವ ಬಿಸಿಲ ಬೇಗೆಯಿಂದ ಕೆಲ ಗ್ರಾಮಗಳಲ್ಲಿ ಕುಡಿ ಯುವ ನೀರು ಪೂರೈಕೆ ಮಾಡುವ ಬೋರ್‌ವೆಲ್, ಬಾವಿ ಇತರ ಜಲಮೂಲಗಳ ಅಂತರ್ಜಲ ಮಟ್ಟ ಕುಸಿಯಲಾರಂಭಿಸಿದೆ. ಇದರಿಂ ಚಳಿಗಾಲದ ಆರಂಭದಲ್ಲಿಯೇ ಜೀವ ಜಲಕ್ಕೆ ತತ್ವಾರ ಎದುರಾಗಲು ಮುಖ್ಯ ಕಾರಣ

ವಾಗಿದೆ ಎಂದು ಜಿಪಂ ಆಡಳಿತ ಮೂಲಗಳು ಹೇಳುತ್ತವೆ. ಗ್ರಾಮೀಣ ಕುಡಿಯುವ ನೀರು ಹಾಗೂ ಸ್ವಚ್ಛತೆ ಇಲಾಖೆಯ ಕಾರ್ಯ ಪಾಲಕ ಅಭಿಯಂತರ ಎಸ್.ಎಂ. ಹರೀಶ್, ಗುರುವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಮಾತನಾ ಡಿದರು. ಇತ್ತೀಚೆಗೆ ಶಿವಮೊಗ್ಗ ತಾಲೂಕಿನ ಕೊಮ್ಮನಾಳು, ಆಲ್ದಳ್ಳಿ, ಕುಂಸಿ, ಪುರದಾಳು ಗ್ರಾಮಗಳಲ್ಲಿ ಹಾಗೂ ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ, ಮೂಡಲ ಹಿತ್ಲಾಪುರ, ಮಾರಶೆಟ್ಟಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆ ಯಲ್ಲಿ ತೀವ್ರ ವ್ಯತ್ಯಯ ಉಂಟಾಗಿತ

್ತು. ವಿಷಯ ತಿಳಿಯುತ್ತಿದ್ದಂತೆ ಈ ಗ್ರಾಮ ಗಳಲ್ಲಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹೊಸದಾಗಿ ಬೋರ್‌ವೆಲ್ ಕೊರೆಯಿಸುವುದು ಸೇರಿದಂತೆ ಇತರ ಪರಿಹಾರ ಕಾರ್ಯ ನಡೆಸಲಾಗುತ್ತಿದೆ. ಲಭ್ಯ ವಿರುವ ಅನುದಾನ ಬಳಕೆ ಮಾಡಿಕೊಂಡು ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸ್ಥಳೀಯ ಗ್ರಾಮ ಪಂಚಾಯತ್ ಆಡಳಿತಗಳಿಗೆ ನಿರ್ದೇಶನ ನೀಡಲಾಗದೆ ಎಂದು ಹೇಳಿದ್ದಾರೆ. ಬೇಸಿಗೆ ಅವಧಿಯ ಎಪ್ರಿಲ್, ಮೇ ತಿಂಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿತ್ತು. ಆದರೆ, ಈ ಬಾರಿ ಬೇಸಿಗೆ ಆರಂಭಕ್ಕೂ ಮುನ್ನವೆ ಕೆಲ ಗ್ರಾಮಗಳಲ್ಲಿ ಸಮಸ್ಯೆ ಸೃಷ್ಟಿ ಯಾಗಿದೆ. ಮಳೆಯ ತೀವ್ರ ಕೊರತೆ ಹಾಗೂ ಹೆಚ್ಚಾಗುತ್ತಿರುವ ತಾಪಮಾನದಿಂದ ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಕುಡಿಯುವ ನೀರಿನ ಅಭಾವ ಉಂಟಾಗುತ್ತಿದೆ. ಪರಿಸ್ಥಿತಿ ನಿಭಾಯಿಸಲು ಎಲ್ಲ ರೀತಿಯ ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಎಸ್. ಎಂ. ಹರೀಶ್ ಅವರು ತಿಳಿಸಿದ್ದಾರೆ. ಮುಂಬರುವ ಬೇಸಿಗೆ ಸ್ಥಳೀಯಾಡಳಿತಗಳಿಗೆ ನಿಜಕ್ಕೂ ಸವಾಲಿನದ್ದಾಗಿದೆ. ಈಗಲೇ ಕುಡಿಯುವ ನೀರಿಗೆ ಹಲವು ಗ್ರಾಮಗಳಲ್ಲಿ ತತ್ವಾರ ಎದುರಾಗಿದೆ. ಬೇಸಿಗೆಯಲ್ಲಿ ಈ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬಯಲು ಸೀಮೆಯ ಪ್ರದೇಶಗಳಲ್ಲಿ ಕಂಡುಬರುತ್ತಿದ್ದ ಹಾಹಾಕಾರ ಮಲೆನಾಡಿನ ಗ್ರಾಮಗಳಲ್ಲಿಯೂ ತಲೆದೋರುವ ಸಾಧ್ಯತೆ ದಟ್ಟವಾಗಿದೆ. ಮಳೆಯಾದರೆ ಪರಿಸ್ಥಿತಿ ಸುಧಾರಣೆಯಾಗಲಿದೆ. ಇಲ್ಲದಿದ್ದರೆ ಸಂಕಷ್ಟದ ದಿನಗಳು ಕಟ್ಟಿಟ್ಟ ಬುತ್ತಿಯಾಗಿದೆ ಎಂದು ಜಿ.ಪಂ.ನ ಹಿರಿಯ ಅಧಿಕಾರಿಯೋರ್ವರು ಅಭಿಪ್ರಾಯ ಪಡುತ್ತಾರೆ. ಒಟ್ಟಾರೆ ಮಲೆನಾಡಿನಲ್ಲಿ ಬಯಲು ಸೀಮೆಯ ವಾತಾವರಣ ಮನೆ ಮಾಡಿದೆ. ಕ್ರಮೇಣ ಬರಗಾಲದ ಬಿಸಿ ನಾಗರಿಕರಿಗೆ ತಟ್ಟಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಮಲೆನಾಡಿನ ಗ್ರಾಮಗಳು ತೀವ್ರ ಸ್ವರೂಪದ ಕುಡಿಯುವ ನೀರಿನ ಸಮಸ್ಯೆಗೆ ಸಿಲುಕುವ ಆತಂಕ ಎದುರಾಗಿರುವುದಂತೂ ಸತ್ಯ.

ಮಳೆ ಕೊರತೆಯ ಎಫೆಕ್ಟ್

ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಪ್ರಸ್ತುತ ವರ್ಷ ವಾಡಿಕೆಯ ಮಳೆಯಾಗಿಲ್ಲ. ವರ್ಷಧಾರೆಯ ತೀವ್ರ ಕೊರತೆಯಿಂದ ಪ್ರಮುಖ ಜಲಾಶಯ, ಕೆರೆಕಟ್ಟೆಗಳು ಭರ್ತಿಯಾಗಿಲ್ಲ. ಮತ್ತೊಂದೆಡೆ ಕಳೆದ ಕೆಲ ವಾರಗಳಿಂದ ಜಿಲ್ಲೆಯಾದ್ಯಂತ ತಾಪಮಾನದ ಪ್ರಮಾಣದಲ್ಲಿ ದಿಢೀರ್ ಹೆ

ಚ್ಚಳ ಕಂಡುಬಂದಿದೆ. ಇದರಿಂದ ಬೋರ್‌ವೆಲ್, ಕೆರೆಕಟ್ಟೆಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಇಳಿಕೆ ಯಾಗುತ್ತಿದೆ. ಅಂತರ್ಜಲ ಮಟ್ಟ ಕುಸಿಯಲಾರಂಭಿಸಿದೆ.

ವಿದ್ಯುತ್ ಲೋಡ್‌ಶೆಡ್ಡಿಂಗ್‌ನಿಂದ ಮತ್ತಷ್ಟು ಸಮಸ್ಯೆ

  ಒಂದೆಡೆ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ತಾಪಮಾನ ಹೆಚ್ಚಳದಿಂದ ಅಂತರ್ಜಲ ಬರಿದಾಗಿ ನೀರಿನ ಅಭಾವ ತಲೆದೋರಿದ್ದರೆ, ಮತ್ತೊಂದೆಡೆ ಅನಿಯಮಿತ ವಿದ್ಯುತ್ ಲೋಡ್‌ಶೆಡ್ಡಿಂ ಗ್‌ನಿಂದ ಹಲವು ಗ್ರಾಮಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಗ್ರಾಮೀಣ ಭಾಗದ ಜನರು ಜೀವಜಲಕ್ಕಾಗಿ ಪರಿತಪಿಸುವಂತಹ ದುಃಸ್ಥಿತಿ ನಿರ್ಮಾಣವಾಗಿದೆ. ಪ್ರಸ್ತುತ ನಗರ-ಪಟ್ಟಣ ಪ್ರದೇಶಗಳಲ್ಲಿ ಬೇಕಾಬಿಟ್ಟಿಯಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಗ್ರಾಮೀಣ ಭಾಗಗಳ ಲ್ಲಂತೂ ಪರಿಸ್ಥಿತಿ ಹೇಳತೀರದಾಗಿದೆ. ಯಾವಾಗ ವಿದ್ಯುತ್ ಇರಲಿದೆ ಎಂಬುದೇ ಗೊತ್ತಾಗದ ಮಟ್ಟಕ್ಕೆ ಲೋಡ್‌ಶೆಡ್ಡಿಂಗ್ ಮಾಡಲಾಗುತ್ತಿದೆ. ಇದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವಂತಾಗಿದೆ. ಕೆಲ ಗ್ರಾಮಗ ಳಲ್ಲಿ ಸ್ಥಳೀಯಾಡಳಿತಗಳು ರಾತ್ರಿ ವೇಳೆ ನೀರು ಪೂರೈಕೆ ಮಾಡುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ತಕ್ಷಣವೇ ಅನಿಯಮಿತ ವಿದ್ಯುತ್ ಲೋಡ್ಶೆಡ್ಡಿಂಗ್ ರದ್ದುಪಡಿಸಬೇಕು. ನಗರ-ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತದ ವೇಳಾಪಟ್ಟಿ ಯನ್ನು ರಾಜ್ಯ ಸರಕಾರ ಪ್ರಕಟಿಸಬೇಕು. ಈ ಮೂಲಕ ವಿದ್ಯುತ್ ಕಡಿತದಿಂದ ನಾಗರಿಕರು ಎದುರಿಸು ತ್ತಿರುವ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News