ನ.9 ರಂದು ಶ್ರೀನಿವಾಸ್‌ ಪ್ರಸಾದ್‌ ಬಿಜೆಪಿಗೆ ?

Update: 2016-10-29 08:22 GMT

ಬೆಂಗಳೂರು, ಅ.29:ಕಾಂಗ್ರೆಸ್‌ ನಿಂದ ಹೊರ ನಡೆದಿರುವ ಮಾಜಿ ಸಚಿವ ಶ್ರೀನಿವಾಸ್‌ ಪ್ರಸಾದ್‌ ನವೆಂಬರ್‌ 9 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ  ಎಂದು ತಿಳಿದು ಬಂದಿದೆ.
ರವಿವಾರ ಶ್ರೀನಿವಾಸ್‌ ಪ್ರಸಾದ್‌ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭೇಟಿಯಾಗಿ ಬಿಜೆಪಿ ಸೇರಲು ಅಧಿಕೃತವಾಗಿ ಆಹ್ವಾನ ನೀಡಲಿದ್ದಾರೆಂದು ತಿಳಿದು ಬಂದಿದೆ. ಈಗಾಗಲೇ ಬಿಜೆಪಿ ನಾಯಕರು ಶ್ರೀನಿವಾಸ್‌ ಪ್ರಸಾದರನ್ನು ಭೇಟಿಯಾಗಿ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ. 
ಇದೇ ವೇಳೆ ಶ್ರೀನಿವಾಸ್ ಪ್ರಸಾದ್‌ ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಅವರ ಕ್ಷೇತ್ರ ನಂಜನಗೂಡಿನಲ್ಲಿ ಕಾಂಗ್ರೆಸ್‌ ನಾಯಕರು ಅಪರೇಶನ್‌ ಹಸ್ತಕ್ಕೆ ಮುಂದಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಮಹದೇವಪ್ಪ, ಸಚಿವ ಮಹದೇವ್ ಪ್ರಸಾದ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಸಿದ್ದತೆ ನಡೆಸುತ್ತಿದೆ. ಪ್ರಮುಖ ದಲಿತ ನಾಯಕರಿಗೆ ಕಾಂಗ್ರೆಸ್‌ ಗಾಳ ಹಾಕಿದೆ ಎಂದು ತಿಳಿದು ಬಂದಿದೆ.
ನವೆಂಬರ್‌ 7ರಂದು ನಂಜನಗೂಡಿನಲ್ಲಿ ಶ್ರೀನಿವಾಸ್‌ ಪ್ರಸಾದ್ ಬೆಂಬಲಿಗರ ಸಮಾವೇಶ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಶ್ರೀನಿವಾಸ್‌ ಪ್ರಸಾದ್‌ ತನ್ನ ನಿರ್ಧಾರವನ್ನು ಪ್ರಕಟಿಸಲಿದ್ದಾರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News