ಪುರಭವನದಲ್ಲಿ ರಾಜ್ಯೋತ್ಸವ ದಿನಾಚರಣೆ, ವಿವಿಧ ಕಾರ್ಯಕ್ರಮ
Update: 2016-10-30 18:10 GMT
ಮಂಗಳೂರು, ಅ.30: ದ.ಕ. ಜಿಲ್ಲಾಡಳಿತ, ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು, ದ.ಕ. ಜಿಲ್ಲಾ ಕಸಾಪ ಇವುಗಳ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಂದು ನಗರದ ಪುರಭವನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಅಪರಾಹ್ನ 3ಕ್ಕೆ ಪೋಲಿಸ್ ಬ್ಯಾಂಡ್ನೊಂದಿಗೆ ಸಮಾರಂಭ ಆರಂಭಗೊಳ್ಳಲಿದ್ದು, ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಬಿ.ಎಂ.ಇಚ್ಲಂಗೋಡು ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ - ಕವನ ವಾಚನ ನಡೆಯಲಿದ್ದು, ಹೊರನಾಡ ಹಾಗೂ ಸ್ಥಳೀಯ ಸಾಧಕ ಮಕ್ಕಳಿಗೆ ಸಾಧಕ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.