ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಪರಾರಿ

Update: 2016-10-31 13:44 GMT

ಬಂಟ್ವಾಳ, ಅ. 30: ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಎಗರಿಸಿ ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ನೆಕ್ಕರೆಕಾಡು ನಿವಾಸಿ ಲಕ್ಷ್ಮೀ(55) ಎಂಬವರು ವಿಟ್ಲ ಮಂಗಳೂರು ಮುಖ್ಯ ರಸ್ತೆಯಿಂದ ದೇವಸ್ಯ ಹೋಗುವ ಒಳ ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅವರ ಕುತ್ತಿಗೆಯಲ್ಲಿದ್ದ 2.5 ಪವನ್ ಕರಿಮಣಿ ಸರ ಹಾಗೂ 1.25 ಪವನ್‌ನ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.

ಈ ಬಗ್ಗೆ ವಿಟ್ಲ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪೊಲೀಸರು ಕಳ್ಳರ ಜಾಡು ಹಿಡಿದು ತನಿಖೆ ಆರಂಭಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News