ನಾಳೆ ಉಪ್ಪಿನಂಗಡಿಯಲ್ಲಿ ಹುಖೂಕುಲ್ ಇಬಾದ್ ಸ್ನೇಹಸಮ್ಮಿಲನ ಕಾರ್ಯಕ್ರಮ

Update: 2016-10-31 13:54 GMT

ಮಂಗಳೂರು,ಅ.31: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಮತ್ತು ಮದ್ರಸ ಮ್ಯಾನೇಜ್‌ಮೆಂಟ್ ಕಮಿಟಿಯ ಜಂಟಿ ಆಶ್ರಯದಲ್ಲಿ ಉಪ್ಪಿನಂಗಡಿ ಮತ್ತು ಕಡಬ ರೇಂಜ್‌ಗೊಳಪಟ್ಟ ಮಸೀದಿಗಳ ಖತೀಬರು, ಮದ್ರಸ ಅದ್ಯಾಪಕರು ಮತ್ತು ಮದ್ರಸ ಮ್ಯಾನೇಜ್‌ಮೆಂಟ್‌ನ ಪದಾಧಿಕಾರಿಗಳ ಸ್ನೇಹಸಮ್ಮಿಲನ ಕಾರ್ಯಕ್ರಮವು ನ.1 ರಂದು ಪೂರ್ವಾಹ್ನ ಗಂಟೆ 9.30ಕ್ಕೆ ಉಪ್ಪಿನಂಗಡಿಯ ಎಚ್.ಎಂ ಅಡಿಟೋರಿಯಂ ನಲ್ಲಿ ನಡೆಯಲಿದೆ. ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್ ಆತೂರು ಖತೀಬ್ ದುಅ ನೆರವೇರಿಸಲಿದ್ದು, ಉಪ್ಪಿನಂಗಡಿ ಖತೀಬ್ ಅಬ್ದುಲ್ ಸಲಾಂ ಫೈಝಿ ಎಡಪ್ಪಾಲ್ ಉದ್ಘಾಟಿಸಲಿದ್ದಾರೆ. ಹಾಜಿ ಮುಸ್ತಫಾ ಕೆಂಪಿ, ಅಧ್ಯಕ್ಷರು ಉಪ್ಪಿನಂಗಡಿ ಮಸೀದಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹುಖೂಕುಲ್ ಇಬಾದ್-ಮನುಕುಲದ ಸೇವೆ ವಿಷಯದಲ್ಲಿ ಸಮಸ್ತ ಮುಶಾವರ ಕರ್ನಾಟಕ ಸದಸ್ಯ ಅಲ್‌ಹಾಜ್ ಇಬ್ರಾಹಿಂ ಬಾಖವಿ ಕೆ.ಸಿ ರೋಡ್ ಮತ್ತು ಟ್ಯಾಲೆಂಟ್ ಸಲಹೆಗಾರ ರಫೀಕ್ ಮಾಸ್ಟರ್ ತರಗತಿ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಯ್ಯದ್ ಅನಸ್ ಹಾದಿ ತಂಙಳ್ ಗಂಡಿಬಾಗಿಲು ಖತೀಬ್, ಪಿ.ಎಂ ಇಬ್ರಾಹಿಂ ದಾರಿಮಿ, ಅಧ್ಯಕ್ಷರು ಕಡಜ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್, ಎಂ.ಎಂ ಇಬ್ರಾಹಿಂ ದಾರಿಮಿ ಉಪ್ಪಿನಂಗಡಿ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್, ಎಂ.ಕೆ ಅಶ್ರಫ್ ಮೌಲವಿ ಕೋಲ್ಪೆ, ಪ್ರ.ಕಾರ್ಯದರ್ಶಿ, ಕಡಜ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್, ಕೆ.ಎಂ.ಎಸ್ ಸಿದ್ದೀಖ್ ಫೈಝಿ ಕರಾಯ, ಪ್ರ.ಕಾರ್ಯದರ್ಶಿ,  ಉಪ್ಪಿನಂಗಡಿ ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್, ಹಾಜಿ ಎಸ್.ಅಬ್ದುಲ್ ಖಾದರ್, ಅಧ್ಯಕ್ಷರು ಕಡಬ ರೇಂಜ್ ಮದ್ರಸ ಮ್ಯಾನೇಜ್‌ಮೆಂಟ್, ಹಾಜಿ ಅಬ್ದುಲ್ ರಹಿಮಾನ್ ಕೊಳ್ಳೆಜಾಲ್, ಅಧ್ಯಕ್ಷರು, ಉಪ್ಪಿನಂಗಡಿ ರೇಂಜ್ ಮದ್ರಸ ಮ್ಯಾನೇಜ್‌ಮೆಂಟ್, ಇಬ್ರಾಹಿಂ ಕಲಾರ, ಪ್ರ.ಕಾರ್ಯದರ್ಶಿ, ಕಡಬ ರೇಂಜ್ ಮದ್ರಸ ಮ್ಯಾನೇಜ್‌ಮೆಂಟ್, ಹಾಜಿ ಯೂಸುಫ್, ಪ್ರ.ಕಾರ್ಯದರ್ಶಿ, ಉಪ್ಪಿನಂಗಡಿ ರೇಂಜ್ ಮದ್ರಸ ಮ್ಯಾನೇಜ್‌ಮೆಂಟ್, ಡಿ ಅಬ್ದುಲ್ ಹಮೀದ್ ಕಣ್ಣೂರು, ಪ್ರ.ಕಾರ್ಯದರ್ಶಿ ಟಿ.ಆರ್.ಎಫ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಮತ್ತು ಕಡಬ ರೇಂಜ್‌ಗೊಳಪಟ್ಟ ಎಲ್ಲಾ ಮಸೀದಿಗಳ ಖತೀಬರು, ಮದ್ರಸಗಳ ಅದ್ಯಾಪಕರು, ಮದ್ರಸ ಮ್ಯಾನೇಜ್‌ಮೆಂಟ್ ಕಮಿಟಿಗಳ ಪದಾಧಿಕಾರಿಗಳು, ಜಮಾಅತ್ ಕಮಿಟಿಯ ಪದಾಧಿಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸುವಂತೆ ಕಾರ್ಯಕ್ರಮದ ಸಂಯೋಜಕ ಅಸ್ಪರ್ ಹುಸೈನ್ ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News