ಕಾರು ಮರಕ್ಕೆ ಢಿಕ್ಕಿ 5ಮಂದಿಗೆ ಗಾಯ
Update: 2016-10-31 19:52 IST
ಮಂಜೇಶ್ವರ,ಅ.31: ಶಿರಿಯ ಪೆಟ್ರೋಲ್ ಪಂಪ್ ಸಮೀಪ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದು 5 ಮಂದಿ ಗಾಯಗೊಂಡರು. ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಸಂಜೆ 4 ಗಂಟೆಗೆ ಅಪಘಾತ ಸಂಭವಿಸಿದೆ.
ಬಂದ್ಯೋಡ್ನ ಕುಟುಂಬವೊಂದು ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುವಾಗ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಅಲ್ಪಹೊತ್ತು ಹೆದ್ದಾರಿಯಲ್ಲಿ ಸಂಚಾರ ತಡೆ ಉಂಟಾಯಿತು.