ಇಂದು ಸ್ನೇಹ ಸಮ್ಮಿಲನ

Update: 2016-10-31 18:01 GMT

ಮಂಗಳೂರು, ಅ.31: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಮತ್ತು ಮದ್ರಸ ಮ್ಯಾನೇಜ್‌ಮೆಂಟ್ ಕಮಿಟಿ ಇವುಗಳ ಜಂಟಿ ಆಶ್ರಯದಲ್ಲಿ ಉಪ್ಪಿನಂಗಡಿ ಮತ್ತು ಕಡಬ ರೇಂಜ್‌ಗೊಳಪಟ್ಟ ಮಸೀದಿಗಳ ಖತೀಬರು, ಮದ್ರಸ ಅಧ್ಯಾಪಕರು ಮತ್ತು ಮದ್ರಸ ಮ್ಯಾನೇಜ್‌ಮೆಂಟ್‌ನ ಪದಾಧಿಕಾರಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮವು ನ.1ರಂದು ಬೆಳಗ್ಗೆ 9:30ಕ್ಕೆ ಉಪ್ಪಿನಂಗಡಿಯ ಎಚ್.ಎಂ ಆಡಿಟೋರಿಯಂನಲ್ಲಿ ನಡೆಯಲಿದೆ. ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್ ಆತೂರು ಖತೀಬ್ ದುಆ ನೆರವೇರಿಸಲಿದ್ದು, ಉಪ್ಪಿನಂಗಡಿ ಖತೀಬ್ ಅಬ್ದುಲ್ ಸಲಾಂ ಫೈಝಿ ಎಡಪ್ಪಾಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪ್ಪಿನಂಗಡಿ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ, ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಹುಖೂಕುಲ್ ಇಬಾದ್-ಮನುಕುಲದ ಸೇವೆ ವಿಷಯದಲ್ಲಿ ಸಮಸ್ತ ಮುಶಾವರ ಕರ್ನಾಟಕ ಸದಸ್ಯ ಅಲ್‌ಹಾಜ್ ಇಬ್ರಾಹೀಂ ಬಾಖವಿ ಕೆ.ಸಿ.ರೋಡ್ ಮತ್ತು ಟ್ಯಾಲೆಂಟ್ ಸಲಹೆಗಾರ ರಫೀಕ್ ಮಾಸ್ಟರ್ ಉಪನ್ಯಾಸ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News