ನ.3ಕ್ಕೆ ಕರಾವಳಿ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸಭೆ
Update: 2016-10-31 23:49 IST
ಉಡುಪಿ, ಅ.31: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಇರುವ ಹಲವು ಸಮಸ್ಯೆಗಳ ಕುರಿತು ಚರ್ಚಿ ಸಲು ಮುಖ್ಯಮಂತ್ರಿ ನ.3ರಂದು ಪೂರ್ವಾಹ್ನ 11:15ಕ್ಕೆ ವಿಧಾನಸೌಧದ 3ನೆ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ (ನಂ.313) ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಕರೆದಿದ್ದಾರೆ.
ಈ ಸಭೆಯಲ್ಲಿ ಗಣಿ ಇಲಾಖೆಗೆ ಸಂಬಂಧಿಸಿದಂತೆ ಮರಳು ಸಮಸ್ಯೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸಂಬಂಧಿಸಿದ ಬಿಳಿ ಸೀಮೆಎಣ್ಣೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ 9/11 ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿಯ ಪದನಿಮಿತ್ತ ಕಾರ್ಯದರ್ಶಿಯ ಪ್ರಕಟನೆ ತಿಳಿಸಿದೆ.