ಚಂದ್ರಶೇಖರ್

Update: 2016-10-31 18:45 GMT

ಮಂಜೇಶ್ವರ, ಅ.31: ಹೊಸಂಗಡಿ ನಿವಾಸಿ ಬಿ.ಎಂ. ಚಂದ್ರಶೇಖರ್(67) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು.

 
ಮಂಗಳೂರಿನ ವೆನ್‌ಲಾಕ್ ಜಿಲ್ಲಾಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ, ವಾಮಂಜೂರಿನ ಕ್ಷಯ ರೋಗ ಆಸ್ಪತ್ರೆ, ಉಡುಪಿಯ ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಒಟ್ಟು ಸುಮಾರು 35ವರ್ಷ ಸರಕಾರಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬಳಿಕ ಎ.ಜೆ. ಆಸ್ಪತ್ರೆಯಲ್ಲಿ ಐದು ವರ್ಷ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ