ಕಡಬ ತಹಶೀಲ್ದಾರ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ

Update: 2016-11-01 06:18 GMT

ಕಡಬ, ನ.1: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ 60ನೆ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಚರಿಸಲಾಯಿತು.

ಸರಸ್ವತೀ ವಿದ್ಯಾಸಂಸ್ಥೆ ಮತ್ತು ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಕಡಬ ಪೇಟೆಯಲ್ಲಿ ಮೆರವಣಿಗೆ ಮೂಲಕ ಸಾಗಿದರು. ಕಡಬ ತಹಶೀಲ್ದಾರ್ ಬಿ.ಲಿಂಗಯ್ಯ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡಿದರು. ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್, ಸಿಆರ್ ಪಿ ಕುಮಾರ್ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯ ಫಝಲ್ ಕೋಡಿಂಬಾಳ ಸಭಾಧ್ಯಕ್ಷತೆ ವಹಿಸಿದ್ದರು.

ನಿವೃತ್ತ ಯೋಧ,  ನಿವೃತ್ತ ಉಪನ್ಯಾಸಕ ಮ್ಯಾಥ್ಯೂ ಪಿ.ಜಿ. ಪ್ರಧಾನ ಭಾಷಣ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News