ಪ್ರಾದೇಶಿಕ ಅರಣ್ಯ ಕ್ರೀಡಾಕೂಟ-2016

Update: 2016-11-03 18:29 GMT

ಬೆಳ್ತಂಗಡಿ, ನ.3: ಮಂಗಳೂರು, ಶಿವಮೊಗ್ಗ ಮತ್ತು ಕೊಡಗು ಅರಣ್ಯ ಇಲಾಖೆ ವೃತ್ತಗಳ ಎರಡು ದಿನಗಳ ಪ್ರಾದೇಶಿಕ ಅರಣ್ಯ ಕ್ರೀಡಾಕೂಟ-2016 ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗುರುವಾರ ಪ್ರಾರಂಭ ಗೊಂಡಿತು.
ಕ್ರೀಡಾಕೂಟವನ್ನು ತಾಪಂ ಅಧ್ಯಕ್ಷೆ ದಿವ್ಯಜ್ಯೋತಿ ಉದ್ಘಾಟಿಸಿದರು.

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತಾ ಅರೆಕ್ಕಲ್ ಧ್ವಜಾರೋಹಣ ನೆರವೇರಿಸಿದರು. ಉಜಿರೆ ಗ್ರಾಪಂ ಅಧ್ಯಕ್ಷ ಶ್ರೀಧರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಜಿಪಂ ಸದಸ್ಯೆ ನಮಿತಾ ಕೆ., ತಾಪಂ ಸದಸ್ಯ ಶಶಿಧರ ಎಂ., ಅರಣ್ಯ ಅಭಿವೃದ್ಧಿ ನಿಗಮದ ಕಾರ್ಯ ನಿರ್ವಾಹಕ ನಿರ್ದೇಶಕಿ ಸ್ಮಿತಾ ಬಿಜ್ಜೂರ್, ಮಂಗಳೂರು ವೃತ್ತ ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂಜಯ್ ಎಸ್. ಬಿಜ್ಜೂರ್, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್, ಕುದುರೆಮುಖ ವನ್ಯಜೀವಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮರಿಯ ಕ್ರಿಸ್ಟುರಾಜು, ಸಾಮಾಜಿಕ ಅರಣ್ಯ ವಿಭಾಗ ಉಪಅರಣ್ಯ ಸಂರಕ್ಷಣಾಧಿಕಾರಿ ಎಂ. ಮೋಹನ್ ಕುಮಾರ್, ಸಾಮಾಜಿಕ ಅರಣ್ಯ ವಿಭಾಗ ಉಪಅರಣ್ಯ ಸಂರಕ್ಷಣಾಧಿಕಾರಿ ಆರ್. ಜಿ. ಭಟ್, ಅರಣ್ಯ ವಿಚಕ್ಷಣಾ ದಳ ಉಪಅರಣ್ಯ ಸಂರಕ್ಷಣಾಧಿಕಾರಿ ಬಿ. ಸದಾಶಿವ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು, ಶಿವಮೊಗ್ಗ, ಕೊಡಗು ಅರಣ್ಯ ವೃತ್ತಗಳ ಕ್ರೀಡಾಪಟುಗಳಿಂದ ಪಥಸಂಚಲನ ನಡೆಯಿತು. ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ಪ್ರತಿಜ್ಞೆ ಬೋಧಿಸಿದರು. ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ. ಹನುಮಂತಪ್ಪ ಸ್ವಾಗತಿಸಿದರು. ಕುಂದಾಪುರ ವಿಭಾಗ ಉಪಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ.ಅಮರನಾಥ ವಂದಿಸಿದರು. ಕೆ.ಜೆ.ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News