ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿಗೆ ಚಾಲನೆ
ಉಡುಪಿ, ನ.6: ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಬೆಳ್ಳರ್ಪಾಡಿಯಲ್ಲಿ ಇತ್ತೀಚೆಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಮಾತನಾಡಿ, ದೇಶದಲ್ಲಿ ಯುವಕರಿಗೆ ಕಾಂಗ್ರೆಸ್ ಪಕ್ಷವು ನೀಡಿದಷ್ಟು ಕೊಡುಗೆ ಯನ್ನು ಬೇರೆ ಯಾವುದೇ ರಾಜಕೀಯ ಪಕ್ಷವು ನೀಡಿಲ್ಲ. ಆದರೆ ಬಿಜೆಪಿ ಯುವಕರನ್ನು ತಪ್ಪು ದಾರಿಗೆ ಎಳೆದು ಜೈಲಿನಲ್ಲಿ ಕೊಳೆಯುವಂತೆ ಮಾಡಿ ತಂದೆ ತಾಯಿಯನ್ನು ಅನಾಥರಾಗುವಂತೆ ಮಾಡುತ್ತಿದೆ. ಆದ್ದರಿಂದ ಯುವಕರು ಆಲೋಚನೆ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವವನ್ನು ನೊಂದಾಯಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಾಪಂ ಸದಸ್ಯ ಲಕ್ಷ್ಮೀನಾರಾಯಣ ಪ್ರಭು, ಬೈರಂಪಳ್ಳಿ ಗ್ರಾಮೀಣ ಸಮಿತಿ ಅಧ್ಯಕ್ಷ ಪ್ರವೀಣ್ ಪೂಜಾರಿ, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಶ್ರೀಧರ್ ಶೆಟ್ಟಿ ಭೈರಂಪಳ್ಳಿ, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುನೀಲ್ ಬಂಗೇರ, ಮುಖಂಡರಾದ ಕಿರಣ್ ಕುಮಾರ್ ಹೆಗ್ಡೆ, ನಿತಿನ್ ಕುಮಾರ್ ಬೆಳ್ಳರ್ಪಾಡಿ, ಕೃಷ್ಣಾನಂದ ಭೈರಂಪಳ್ಳಿ, ಮಂಜುನಾಥ ಸೇರಿಗಾರ್, ವಿನೋದ್ ಕುಮಾರ್ ಹಿರಿಯಡ್ಕ ಮೊದಲಾದವರು ಉಪಸ್ಥಿತರಿದ್ದರು.