ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2016-11-06 23:18 IST
ಕಾರ್ಕಳ, ನ.6: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರೆಂಜಾಳ ಗ್ರಾಮದಲ್ಲಿ ನ.5ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಬೆಳ್ತಂಗಡಿಯ ಅಳದಂಗಡಿ ನಿವಾಸಿ ಮುಯ್ಯದ್ದಿ (38) ಎಂದು ಗುರುತಿಸಲಾಗಿದೆ.
ಇವರು ರೆಂಜಾಳ ಗ್ರಾಮದಲ್ಲಿರುವ ತನ್ನ ಪತ್ನಿಯ ತಾಯಿಯ ಮನೆಯ ಎದುರು ಭಾಗದಲ್ಲಿರುವ ಆವರಣವಿಲ್ಲದ ಬಾವಿಗೆ ಸೇದಲು ಹಾಕಿದ್ದ ಹಗ್ಗ ಸಮೇತ ಬಾವಿಗೆ ಬಿದ್ದರು. ಕೂಡಲೇ ಅವರನ್ನು ಸ್ಥಳೀಯರು ಮೇಲಕ್ಕೇತ್ತಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.