ಎಡಿಜಿಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ಸಭೆ

Update: 2016-11-07 17:46 GMT

ಮಂಗಳೂರು, ನ. 7: ರಾಜ್ಯದಲ್ಲಿ ನಡೆಯಲಿರುವ ಟಿಪ್ಪು ಜಯಂತಿ ಆಚರಣೆ ಹಾಗೂ ಇತರ ವಿಷಯಗಳ ಕುರಿತಂತೆ ಕಾನೂನು ಮತ್ತು ಸುವ್ಯವಸ್ಥೆ ಪಾಲಿಸುವ ಹಿನ್ನೆಲೆಯಲ್ಲಿ ಎಡಿಜಿಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಬಂದೋಬಸ್ತ್‌ಗೆ ಸಂಬಂಧಿಸಿದ ಸಭೆ ಸೋಮವಾರ ರಾತ್ರಿ ನಡೆಯಿತು.

ಸೋಮವಾರ ನಗರಕ್ಕೆ ಆಗಮಿಸಿದ ಎಡಿಜಿಪಿ, ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭ ನಗರ ಪೊಲೀಸ್ ಕಮಿಷನರ್ ಎಂ.ಚಂದ್ರಶೇಖರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್‌ರಾವ್ ಬೊರಸೆ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಂತರಾಜು, ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಡಾ. ಸಂಜೀವ ಪಾಟೀಲ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News