ಅನಧಿಕೃತ ಬ್ಯಾನರ್ ತೆರವುಗೊಳಿಸಿದ ಪೊಲೀಸರು

Update: 2016-11-10 03:55 GMT

ಮಂಗಳೂರು, ನ.10: ಟಿಪ್ಪು ಜಯಂತಿಯ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಅನಧಿಕೃತ ಬ್ಯಾನರೊಂದನ್ನು ಪೊಲೀಸರು ತೆರವುಗೊಳಿಸಿದ್ದಾರೆ.

ನಗರದ ಅಡ್ಯಾರ ಬಸ್ ನಿಲ್ದಾಣದ ಬಳಿಯಲ್ಲಿ ಟಿಪ್ಪು ಜಯಂತಿಗೆ ಶುಭಕೋರಿ ಸ್ಥಳೀಯ ಸಂಘವೊಂದು ಬ್ಯಾನರ್ ಅಳವಡಿಸಿತ್ತು. ಅಹಿತಕರ ಘಟನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತವು ಟಿಪ್ಪು ಜಯಂತಿ ಆಚರಣೆಗೆ ಸಂಬಂಧಪಟ್ಟಂತೆ ಬ್ಯಾನರ್ ಅಳವಡಿಕೆಗೆ ಅನುಮತಿ ನಿರಾಕರಿಸಿತ್ತು. ಈ ನಡುವೆಯೂ ಬ್ಯಾನರ್ ಅಳವಡಿಸಿದ್ದು, ಪೊಲೀಸರು ಆಗಮಿಸಿ ಬ್ಯಾನರನ್ನು ತೆರವುಗೊಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News