ನ.16ರಂದು ಜಿಲ್ಲಾ ಅಲ್ಪಸಂಖ್ಯಾತರ ಭವನದಲ್ಲಿ ವಕ್ಫ್ ಕಚೇರಿ ಕಾರ್ಯಾರಂಭ

Update: 2016-11-10 13:39 GMT

ಮಂಗಳೂರು, ನ.10: ನಗರದ ಪಾಂಡೇಶ್ವರ ಓಲ್ಡ್ ಕೆಂಟ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಅಲ್ಪಸಂಖ್ಯಾತರ ಭವನದಲ್ಲಿ ಜಿಲ್ಲಾ ವಕ್ಫ್ ಕಚೇರಿಯು ನ.16ರಂದು ಕಾರ್ಯಾರಂಭ ಮಾಡಲಿದೆ.

ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಕ್ಫ್‌ನ ಬಗ್ಗೆ ಮಾಹಿತಿ ಕಾರ್ಯಗಾರವು ನಡೆಯಲಿದೆ. ಜಿಲ್ಲೆಯ ಮಸೀದಿಯ, ಮದ್ರಸದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಭಾಗವಹಿಸಬೇಕು ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News