ವಿವೇಕಾನಂದ ಕ್ಯಾಂಪಸ್‌ನಲ್ಲಿ ಉದ್ಯೋಗಮೇಳಕ್ಕೆ ನೋಂದಣಿ ಆರಂಭ

Update: 2016-11-13 19:00 GMT

ಪುತ್ತೂರು, ನ.13: ಗ್ರಾಮೀಣ ಪ್ರದೇಶದ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಲಕ್ಷದಲ್ಲಿರಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘವು ಪ್ರಥಮ ಬಾರಿಗೆ ಉದ್ಯೋಗ ಮೇಳವೊಂದನ್ನು 2017ರ ಜ.13ರಂದು ಆಯೋಜಿಸಲಾಗಿದೆ. ಸುಮಾರು ಮುನ್ನೂರಕ್ಕೂ ಅಧಿಕ ಕಂಪೆನಿಗಳನ್ನು ಸಂಪರ್ಕಿಸಲಾಗಿದ್ದು, ರಾಜ್ಯ ಹಾಗೂ ಹೊರರಾಜ್ಯದ ಅನೇಕ ಸಂಸ್ಥೆಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಿ ಯುವಕ ಯುವತಿಯರಿಗೆ ಉದ್ಯೋಗ ಕೊಡುವುದಕ್ಕೆ ಉತ್ಸಾಹ ತೋರಿವೆ ಎಂದು ಉದ್ಯೋಗ ಮೇಳ ಸಮಿತಿಯ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಾಥಮಿಕ, ಪ್ರೌಢಶಾಲಾ ಮಟ್ಟದಿಂದ ತೊಡಗಿ ಬಿ.ಎ, ಬಿ.ಎಸ್ಸಿ, ಬಿ.ಕಾಂ ಪದವೀಧರರು, ಐಟಿಐ, ಡಿಪ್ಲೊಮದಂತಹ ವಿಷಯ ವೃತ್ತಿ ಶಿಕ್ಷಣ ಪಡೆದವರು, ಇಂಜಿನಿಯರಿಂಗ್, ಎಂಬಿಎ ಮೊದಲಾದ ವೃತ್ತಿಪರ ಶಿಕ್ಷಣ ಹೊಂದಿದವರು, ಹೀಗೆ ಇನ್ನೂ ಹಲವು ವಿಷಯಗಳಲ್ಲಿ ಪ್ರಶಿಕ್ಷಿತರೂ ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಈಗಾಗಲೇ ಈ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ವೆಬ್‌ಸೈಟನ್ನು ರೂಪಿಸಲಾಗಿದ್ದು, ಈ ವೆಬ್‌ಸೈಟ್‌ನಲ್ಲಿರುವ ಅರ್ಜಿಯನ್ನು ಭರ್ತಿ ಮಾಡಿ ವೆಬ್‌ಸೈಟ್ ವಿಳಾಸ, ಡಬ್ಲೂಡಬ್ಲೂಡಬ್ಲ್ಲೂ.ವಿವೇಕಉದ್ಯೋಗ.ಕಾಮ್‌ನಲ್ಲಿ ಅಥವಾ ನೆಹರೂ ನಗರದ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ರೂಪಿಸಲಾದ ಉದ್ಯೋಗ ಮೇಳದ ಮಾಹಿತಿ ಕೇಂದ್ರಕ್ಕೆ ಆಗಮಿಸಿ ಅಥವಾ ದೂ.ಸಂ: 8105650443/08251-298599ರನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದು.

 ತಮ್ಮ ಹೆಸರನ್ನು ದಾಖಲೆ ಮಾಡಿಕೊಂಡವರಿಗೆ ಉದ್ಯೋಗ ಮೇಳಕ್ಕೆ ಆಗಮಿಸುವಾಗಿನ ಸಿದ್ಧತೆ ಬಗೆಗೆ ಸೂಕ್ತ ಮಾಹಿತಿ ನೀಡಲಾಗುತ್ತದೆ. ಮಾಹಿತಿ ಕೇಂದ್ರ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ತೆರೆದಿರುತ್ತದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News