ವಿಕಲಚೇತನರ ಕ್ಷೇತ್ರಕ್ಕೆ ಅರ್ಜಿ ಆಹ್ವಾನ

Update: 2016-11-18 15:48 GMT

ಉಡುಪಿ, ನ.18: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಡಿ.3ರಂದು ನಡೆಯುವ ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆಯಂದು ಸಮಾಜ ಸೇವೆ, ಕಲೆ, ಕ್ರೀಡೆ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿಕಲಚೇತನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ತಲಾ ಒಬ್ಬರಂತೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಸೇವೆಗೈದ ಒಂದು ಸಂಸ್ಥೆಯನ್ನು ಸನ್ಮಾನಿಸಲಿದ್ದು, ಇದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಈಗಾಗಲೇ ಇಲಾಖೆಯಿಂದ ಪ್ರಶಸ್ತಿ ಪಡೆದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವಂತಿಲ್ಲ. ಆಸಕ್ತರು ನ.25ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ‘ಸಿ’ಬ್ಲಾಕ್, ತಳಅಂತಸ್ತು, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ (ದೂರವಾಣಿ: 0820-2574810/811) ಇಲ್ಲಿಗೆ ವಿಕಲಚೇತನರ ಗುರುತು ಚೀಟಿ ಪ್ರತಿ, ವ್ಯಕ್ತಿ ಪರಿಚಯ ಪತ್ರ ಹಾಗೂ ಸಾಧನೆಗೆ ಸಂಬಂಧಿಸಿದ ದಾಖಲಾತಿಯನ್ನು ಭಾವಚಿತ್ರದೊಂದಿಗೆ ಸಲ್ಲಿಸಲು ಇಲಾಖಾ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News