ಶರೀಅತ್ ಸಂರಕ್ಷಣಾ ಸಮಾವೇಶಕ್ಕೆ ಬೆಂಬಲ

Update: 2016-11-21 16:08 GMT

ಉಡುಪಿ, ನ.21: ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ನ.22 ರಂದು ಮಂಗಳೂರು ನೆಹರೂ ಮೈದಾನದಲ್ಲಿ ನಡೆಯುವ ಶರೀಅತ್ ಸಂರಕ್ಷಣಾ ಸಮಾವೇಶಕ್ಕೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಕೇಂದ್ರ ಸರಕಾರ ತರಲು ಇಚ್ಛಿಸುತ್ತಿರುವ ವೈಯಕ್ತಿಕ ಕಾನೂನು ಸಂಹಿತೆ ಸಂವಿಧಾನ ವಿರೋಧಿಯಾಗಿದೆ. ಇದರಲ್ಲಿ ಕೇಂದ್ರ ಸರಕಾರ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ. ಈ ಸಮಾವೇಶದಲ್ಲಿ ಉಡುಪಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಭಾಗವಹಿಸುವಂತೆ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ವಕ್ಫ್ ಬೋರ್ಡ್: ಉಡುಪಿ ಜಿಲ್ಲಾ ವಕ್ಫ್ ಸಲಹಾ ಮಂಡಳಿಯು ಶರೀಅತ್ ಸಂರಕ್ಷಣಾ ಸಮಾವೇಶಕ್ಕೆ ಬೆಂಬಲ ಸೂಚಿಸಿದ್ದು, ಇದರ ಯಶಸ್ವಿಗಾಗಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಂಡಳಿಯ ಜಿಲ್ಲಾಧ್ಯಕ್ಷ ಯಾಹ್ಯಾ ನಕ್ವಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News