ಉಡುಪಿ: ಸಾರ್ವಜನಿಕರಿಂದ ಅಹವಾಲು ಸ್ವೀಕಾರ
Update: 2016-11-21 23:55 IST
ಉಡುಪಿ, ನ.21: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು ನ.25ರಂದು ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ ನ.26ರಂದು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಪೂರ್ವಾಹ್ನ 11ರಿಂದ ಸಂಜೆ 4ರವರೆಗೆ ಮೊಕ್ಕಾಂ ಇದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷ ತೋರಿದಲ್ಲಿ ಅಥವಾ ಲಂಚ ಕೇಳಿದ್ದರೆ ಈ ಬಗ್ಗೆ ದೂರು ಸಲ್ಲಿಸಬಹುದಾಗಿದೆ.