ಬ್ಯಾಂಕ್‌ಗಳ ಬಂಡವಾಳ ಸ್ಥಿತಿ ಸುಧಾರಣೆ: ಜೇಟ್ಲಿ

Update: 2016-11-22 15:06 GMT

ಹೊಸದಿಲ್ಲಿ, ನ.22: ನೋಟು ಅಮಾನ್ಯಗೊಳಿಸುವ ನಿರ್ಧಾರದಿಂದ ಬ್ಯಾಂಕ್‌ಗಳಲ್ಲಿ ಹೆಚ್ಚಿನ ಬಂಡವಾಳ ಸಂಗ್ರಹವಾಗಿದ್ದು ತನ್ಮೂಲಕ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸರಕಾರಕ್ಕೆ ನೆರವಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲೀ ತಿಳಿಸಿದ್ದಾರೆ.

  ಇಲ್ಲಿ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಹೀಗೆ ಬಂಡವಾಳ ಹರಿದು ಬಂದಾಗ ಕೃಷಿ ಕ್ಷೇತ್ರ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಸಾಧ್ಯವಾಗುತ್ತದೆ. ಅಲ್ಲದೆ ಸಾಲದ ಮೇಲಿನ ಬಡ್ಡಿದರ ಕಡಿಮೆಯಾಗುತ್ತದೆ. ಬ್ಯಾಂಕ್‌ಗಳು ಈಗಾಗಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ ಎಂದರು.

 ನೋಟು ಅಮಾನ್ಯ ವಿಷಯದಲ್ಲಿ ನಾವು ಚರ್ಚೆಗೆ ಸಿದ್ದ ಎಂದು ಹೇಳುವ ಮೂಲಕ ರಾಜ್ಯಸಭೆಯಲ್ಲಿ ವಿಪಕ್ಷಗಳನ್ನು ಅಚ್ಚರಿಯಲ್ಲಿ ಕೆಡವಿದೆವು. ಇದೀಗ ಅವರು ಚರ್ಚೆಯಿಂದ ಪಲಾಯನ ಮಾಡುತ್ತಿದ್ದಾರೆ ಎಂದು ಜೇಟ್ಲೀ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News