ಕಬ್ಬಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಮೊಬೈಲ್ ಟವರ್ ಏರಿದ ರೈತ!

Update: 2016-11-23 13:28 GMT

ಬೆಳಗಾವಿ, ನ.23: ರಾಜ್ಯದಲ್ಲಿ ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ರೈತನೋರ್ವ ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿರುವ ಮೊಬೈಲ್ ಟವರನ್ನು ಏರಿದ್ದಾನೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಬ್ಬು ಬೆಳೆಗೆ ಬೆಮಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ರೈತರು ಸುವರ್ಣಸೌಧದ ಬಳಿ ಧರಣಿ ನಡೆಸುತ್ತಿದ್ದಾರೆ. ಈ ಸಂದರ್ಭ ಚಂದ್ರು ಎಂಬ ರೈತ ಸುವರ್ಣಸೌಧದ ಮುಂಭಾಗದಲ್ಲಿರುವ ಬೃಹತ್ ಮೊಬೈಲ್ ಟವರ್ ಒಂದನ್ನು ಏರಿ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಟವರ್ ಏರಿದ ವ್ಯಕ್ತಿಯನ್ನು ಕೆಳಗಿಳಿಸಲು ಪೊಲೀಸರು ನಡೆಸಿದ ಹರಸಾಹಸ ವಿಫಲವಾಯಿತು. ಬಳಿಕ ಸ್ಥಳಕ್ಕಾಗಮಿಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ರೈತನ ಮನವೊಲಿಸಿ ಆತನನ್ನು ಟವರ್‌ನಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News