×
Ad

ಜೂಜಾಟ: ಒಂಬತ್ತು ಜನರ ಬಂಧನ

Update: 2016-11-24 23:47 IST

ಶಿವಮೊಗ್ಗ, ನ. 24: ಅಂದರ್-ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಒಂಬತ್ತು ಜನರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ನಗರದ ಜೆ.ಪಿ.ನಗರದ 2 ನೆ ಕ್ರಾಸ್‌ನಲ್ಲಿ ನಡೆದಿದೆ. ರಾತ್ರಿ ವೇಳೆ ಮನೆಯೊಂದರ ಮುಂಭಾಗದಲ್ಲಿ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಜೂಜಿನಲ್ಲಿ ತೊಡಗಿದ್ದ ಎಲ್ಲ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ 3,800 ನಗದು, 3 ಬೈಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News