ಸೌದಿಯಲ್ಲಿ ಹೃದಯಾಘಾತದಿಂದ ಕನ್ಯಾನದ ಯುವಕ ಮೃತ್ಯು

Update: 2016-11-25 16:17 GMT

ಬಂಟ್ವಾಳ, ನ. 25: ತಾಲೂಕಿನ ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಅಬ್ದುಲ್ಲ ಹಾಜಿ ಎಂಬವರ ಪುತ್ರ ಖಲಂದರ್ ಶರೀಫ್(40) ಎಂಬವರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಸೌದಿ ಅರೇಬಿಯಾದ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು ಒಂದೂವರೆ ವರ್ಷಗಳ ಹಿಂದೆ ಊರಿಗೆ ಬಂದು ವಾಪಸ್ ತೆರಳಿದ್ದರು. ಶುಕ್ರವಾರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News