ಕಲಂದರ್ ಶರೀಫ್ ನಿಧನ
Update: 2016-11-25 18:42 GMT
ಬಂಟ್ವಾಳ, ನ.25: ತಾಲೂಕಿನ ಕನ್ಯಾನ ಗ್ರಾಮದ ಪನೆಯಡ್ಕ ನಿವಾಸಿ ಅಬ್ದುಲ್ಲ್ಲಾ ಹಾಜಿ ಎಂಬವರ ಪುತ್ರ ಕಲಂದರ್ ಶರೀಫ್(40) ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಸೌದಿ ಅರೇಬಿಯಾದ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಒಂದೂವರೆ ವರ್ಷಗಳ ಹಿಂದೆ ಊರಿಗೆ ಬಂದು ವಾಪಸ್ ತೆರಳಿದ್ದರು. ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.